ಬಿಎಸ್ಪಿ ಪಕ್ಷದಿಂದ ಶಾಸಕ ಎನ್. ಮಹೇಶ್ ಅಮಾನತು

ಮೈತ್ರಿ ಸರ್ಕಾರದ ಪರವಾಗಿ ಎಚ್ ಡಿ ಕುಮಾರಸ್ವಾಮಿ ಮಂಡಿಸಿದ ವಿಶ್ವಾಸಮತಯಾಚನೆ ವೇಳೆಯಲ್ಲಿ ಸದನದಿಂದ ದೂರ ಉಳಿದಿದ್ದ ಕೊಳ್ಳೇಗಾಲದ ಬಿಎಸ್ಪಿ ಪಕ್ಷದ ಎನ್. ಮಹೇಶ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಮೈತ್ರಿ ಸರ್ಕಾರದ ಪರವಾಗಿ ಎಚ್ ಡಿ ಕುಮಾರಸ್ವಾಮಿ ಮಂಡಿಸಿದ  ವಿಶ್ವಾಸಮತಯಾಚನೆ ವೇಳೆಯಲ್ಲಿ ಸದನದಿಂದ ದೂರ ಉಳಿದಿದ್ದ ಕೊಳ್ಳೇಗಾಲದ ಬಿಎಸ್ಪಿ ಪಕ್ಷದ ಎನ್. ಮಹೇಶ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. 
ಪಕ್ಷದ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ  ಶಾಸಕ ಎನ್. ಮಹೇಶ್ ಅವರನ್ನು ಬಿಎಸ್ಪಿ ಪಕ್ಷದಿಂದ ಅಮಾನತುಪಡಿಸಿ ಪಕ್ಷದ ವರಿಷ್ಠೆ ಮಾಯಾವತಿ ಆದೇಶ ಹೊರಡಿಸಿದ್ದಾರೆ.
ಮೈತ್ರಿ ಸರ್ಕಾರದ ಪರವಾಗಿ  ಪಾಲ್ಗೊಂಡು ಕುಮಾರಸ್ವಾಮಿ ಅವರನ್ನು  ಬೆಂಬಲಿಸುವಂತೆ ಮಾಯಾವತಿ ಆದೇಶ ನೀಡಿದ್ದರು.ಆದರೆ, ಇಂದು ನಡೆದ ವಿಶ್ವಾಸಮತಯಾಚನೆ ವೇಳೆಯಲ್ಲಿ ಎನ್. ಮಹೇಶ್ ಗೈರಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ . ಈಬಗ್ಗೆ ಮಾಯಾವತಿ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com