ದೋಸ್ತಿ ಸರ್ಕಾರದ ಅತೃಪ್ತ ಶಾಸಕರು ನೀಡಿರುವ ರಾಜಿನಾಮೆ ವಿಚಾರವಾಗಿ ಸ್ಪೀಕರ್ ರಮೇಶ್ ಕುಮಾರ್ ಅವರು ವಿಚಾರಣೆ ನಡೆಸುತ್ತಿದ್ದು, ಈ ಹಿಂದೆ ಎರಡು ಬಾರಿ ಅತೃಪ್ತರನ್ನು ವಿಚಾರಣೆಗೆ ಆಗಮಿಸುವಂತೆ ಸೂಚಿಸಿದ್ದರು. ಎರಡು ಬಾರಿಯೂ ಅತೃಪ್ತ ಶಾಸಕರು ವಿಚಾರಣೆಗೆ ಗೈರಾಗಿದ್ದರು. ಇದೀಗ ಮತ್ತೆ ಸ್ಪೀಕರ್ ರಮೇಶ್ ಕುಮಾರ್ ಅವರು ಮೂರನೇ ಬಾರಿಗೆ ಅತೃಪ್ತ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ ವಿಚಾರಣೆಗೆ ಗೈರಾದರೆ ಕಠಿಣ ಕ್ರಮ ಜರುಗಿಸುವ ಕುರಿತು ಎಚ್ಚರಿಕೆ ಕೂಡ ನೀಡಿದ್ದಾರೆ.