ಅತೃಪ್ತ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ, ಆಪರೇಶನ್ ಕಮಲಕ್ಕೆ ಬಲಿಯಾದ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರವೇ ಇಲ್ಲ. ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಅವರನ್ನು ಅನರ್ಹಗೊಳಿಸುವುದರಿಂದ ನೂತನ ಸರ್ಕಾರದಲ್ಲಿ ಅವರಿಗೆ ಯಾವುದೇ ಸ್ಥಾನ ನೀಡಲು ಸಾಧ್ಯವಿಲ್ಲ, ಮಂತ್ರಿ ಮಾಡಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.