ಬೆಂಗಳೂರು: ಮುಖ್ಯಮಂತ್ರಿಯಾಗಿದ್ದಾಗ ಕೂಡಾ ತಮ್ಮ ಮೇಲೆ ಸುಳ್ಳು ಆರೋಪಗಳ ಸುರಿಮಳೆಯೇ ನಡೆದಿತ್ತು, ತಮ್ಮ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶಃ ಕೊನೆಯದೂ ಅಲ್ಲ, ಇಂತಹ ಸುಳ್ಳು ಆರೋಪಗಳ ವಿಷಕುಡಿದು, ಕುಡಿದು ತಾವು ಈಗ ವಿಷಕಂಠನಾಗಿರುವುದಾಗಿ, ಕೊನೆಗೆ ಸತ್ಯವೇ ಗೆಲ್ಲಲಿದೆ ಸತ್ಯಮೇವ ಜಯತೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.