ಶಾಸಕರ ರಾಜೀನಾಮೆ ವಿಚಾರದಲ್ಲಿ ವಿಳಂಬ ಮಾಡುತ್ತಿರುವುದರಿಂದಲೇ ನೂತನ ಸರ್ಕಾರ ರಚನೆಗೆ ವಿಳಂಬವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆಯಲ್ಲಾ ಎಂಬ ಮಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸ್ಪೀಕರ್ ರಮೇಶ್ ಕುಮಾರ್, ರಾಜೀನಾಮೆ ನೀಡಿದ ಶಾಸಕರನ್ನ ನಿಯಮ ಪ್ರಕಾರವೇ ವಿಚಾರಣೆಗೆ ಕರೆದಿದ್ದೆ. ಅವರು ಬಂದಿಲ್ಲ. ಪದೇ ಪದೇ ನೊಟೀಸ್ ಕೊಡುತ್ತಾ ಕೂರಲು ನನಗೇನು ಬೇರೆ ಕೆಲಸ ಇಲ್ಲವೇ, ಈ ದೇಶದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಕಾನೂನು ಇರೋದಿಲ್ಲ, ಕೂಲಿ ಮಾಡುವವನಿಗೂ, ಶ್ರೀಮಂತನಿಗೂ ಒಂದೇ ಕಾನೂನು, ನೆನಪಿಟ್ಟುಕೊಳ್ಳಿ ಎಂದರು.