ರಾಮಲಿಂಗಾ ರೆಡ್ಡಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಹೆಚ್ಚಾಗಿ ರಾಜ್ಯದಲ್ಲಿ ನಡೆದ 10-20 ದಿನಗಳ ರಾಜಕೀಯ ಬೆಳವಣಿಗೆಯ ಸಂದರ್ಭದಲ್ಲಿ ರಾಮಲಿಂಗಾ ರೆಡ್ಡಿ ಅವರಿಗೆ ತಾವು, ಎಚ್.ಡಿ.ದೇವೇಗೌಡರು ಹಾಗೂ ಕಾಂಗ್ರೆಸ್ ನಾಯಕರು ಮನವಿ ಮಾಡಿ ಅವರ ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವಂತೆ ಕೋರಿದ್ದೆವು. ಅದರಂತೆ ಅವರು ನಮ್ಮ ಮೇಲೆ ವಿಶ್ವಾಸ ವಿಟ್ಟು ರಾಜೀನಾಮೆಯನ್ನು ವಾಪಸ್ ಪಡೆದು, ಮೈತ್ರಿ ಸರ್ಕಾರದ ಪರವಾಗಿ ಮತ ಚಲಾಯಿಸಿದ್ದಾರೆ. ಈ ಮೂಲಕ ತಾವು ಒಬ್ಬ ನಿಷ್ಠಾವಂತ, ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತ ಎಂಬುದನ್ನು ಸಾಬೀತುಪಡಿಸಿದ್ದಾರೆ. ಆದ್ದರಿಂದ ಅವರಿಗೆ ವೈಯಕ್ತಿಕ ನೆಲೆಯಲ್ಲಿ ಗೌರವ ಸಲ್ಲಿಸಲು ಅವರ ನಿವಾಸಕ್ಕೆ ಭೇಟಿ ನೀಡಿದ್ದೇನೆ ಎಂದರು.