ಬಿ ಎಸ್ ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಲಿಂಗಾಯತ ಸಮುದಾಯದ ಪ್ರಬಲ ಮುಖಂಡರು. ಜಗದೀಶ್ ಶೆಟ್ಚರ್ ತಮಗೆ ಪೈಪೋಟಿ ನಾಯಕ ಎಂಬುದು ಯಡಿಯೂರಪ್ಪನವರಿಗೆ ಸಹ ಗೊತ್ತಿದೆ. ಇದಕ್ಕಾಗಿಯೇ 2008ರಲ್ಲಿ ಬಿ ಎಸ್ ಯಡಿಯೂರಪ್ಪನವರು ತಮ್ಮ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಗೆ ಸಚಿವ ಸ್ಥಾನ ಸಿಗದಂತೆ ಮಾಡಿ ಸಕ್ರಿಯ ರಾಜಕಾರಣದಿಂದ ದೂರವಿರಿಸಲು ಸ್ಪೀಕರ್ ಸ್ಥಾನವನ್ನು ನೀಡಿದ್ದರು ಎಂದು ಹೇಳಲಾಗುತ್ತಿದೆ.