ಮಾಜಿ ಸಿಎಂ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಮಾಧುಸ್ವಾಮಿ, ಕೆ.ಜಿ ಬೋಪಯ್ಯ, ಬಿ.ವೈ ವಿಜಯೇಂದ್ರ ತಡರಾತ್ರಿಯೇ ದೆಹಲಿಗೆ ಆಗಮಿದ್ದಾರೆ.. ಈ ಬಿಜೆಪಿ ನಿಯೋಗ ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಿ ಸರ್ಕಾರ ರಚನೆ ಸಂಬಂಧ ಚರ್ಚೆ ನಡೆಸಲಿದೆ. ಒಂದು ವೇಳೆ ಅಮಿತ್ ಶಾ ಭೇಟಿ ಸಾಧ್ಯವಾಗದಿದ್ದರೆ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಿದೆ.