ಶುಕ್ರವಾರ ಬೆಳಗ್ಗೆ ರಾಜಭವನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿದ ನಂತರ ಬಿ.ಎಸ್ ಯಡಿಯೂರಪ್ಪ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಇಂದು ಸಂಜೆ 6 ರಿಂದ 6.15 ರ ವೇಳೆಗೆ ತಾವು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದರು. ಅಲ್ಲದೇ, ಸರ್ಕಾರ ರಚನೆ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ತಾವು ಮಂಡಿಸಿದ ಮನವಿಯನ್ನು ಸಮ್ಮತಿಸಿರುವ ರಾಜ್ಯಪಾಲರು ಸರ್ಕಾರ ರಚಿಸಲು ಸೂಚನೆ ನೀಡಿದ್ದಾರೆ ಎಂದರು.