ರೈತರಿಗೆ ಗಿಫ್ಟ್, ನೇಕಾರರ ಸಾಲ ಮನ್ನಾ, ಜು.29ಕ್ಕೆ ಬಹುಮತ ಸಾಬೀತು: ಸಿಎಂ ಯಡಿಯೂರಪ್ಪ ಘೋಷಣೆ

ಜು.29 ಕ್ಕೆ ಬಹುಮತ ಸಾಬೀತುಪಡಿಸುವುದಾಗಿ ನೂತನ ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಹೆಚ್ಚು ಅನುದಾನ, ನೇಕಾರರ ಸಾಲ ಮನ್ನಾ, ಜು.29ಕ್ಕೆ ಬಹುಮತ ಸಾಬೀತು: ಸಿಎಂ ಯಡಿಯೂರಪ್ಪ
ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಹೆಚ್ಚು ಅನುದಾನ, ನೇಕಾರರ ಸಾಲ ಮನ್ನಾ, ಜು.29ಕ್ಕೆ ಬಹುಮತ ಸಾಬೀತು: ಸಿಎಂ ಯಡಿಯೂರಪ್ಪ
ಬೆಂಗಳೂರು: ಜು.29 ಕ್ಕೆ ಬಹುಮತ ಸಾಬೀತುಪಡಿಸುವುದಾಗಿ ನೂತನ ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. 
ಪ್ರಮಾಣವಚನ ಸ್ವೀಕರಿಸಿ, ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿರುವ ಯಡಿಯೂರಪ್ಪ, ತಮ್ಮ ನೇತೃತ್ವದ ಸರ್ಕಾರದ ಮೊದಲ ನಿರ್ಣಯಗಳನ್ನು ತಿಳಿಸಿದ್ದಾರೆ. 
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯದಿಂದಲೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರ ಮೂರು ಕಂತುಗಳಲ್ಲಿ 2 ಸಾವಿರ ರೂಪಾಯಿಯಂತೆ ವಾರ್ಷಿಕ 6 ಸಾವಿರ ರೂಪಾಯಿ ನೀಡುತ್ತಿದೆ. ಈ ಯೋಜನೆಗೆ ರಾಜ್ಯ ಸರ್ಕಾರವೂ ಅನುದಾನ ನೀಡಲಿದ್ದು, 2 ಕಂತುಗಳಲ್ಲಿ 2 ಸಾವಿರದಂತೆ ಒಟ್ಟಾರೆ 4 ಸಾವಿರ ರೂಪಾಯಿ ಹಣವನ್ನು ರೈತರ ಖಾತೆಗೆ ಕಳುಹಿಸುತ್ತೇವೆ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. 
ರಾಜ್ಯ ಸರ್ಕಾರದ ಈ ನಿರ್ಣಯದಿಂದ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಒಟ್ಟಾರೆ 10 ಸಾವಿರ ರೂಪಾಯಿ ಹಣ ಸಿಗಲಿದೆ. ನೇಕಾರರ 100 ಕೋಟಿ ರೂಪಾಯಿ ಸಾಲ ಮನ್ನಾವನ್ನೂ ಸಿ.ಎಂ ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿ ಘೋಷಿಸಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com