ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಲು ಮನವಿ ಸಲ್ಲಿಸಿದ್ದಾರೆ.. ಇಂದು ಯಡಿಯೂರಪ್ಪ ಒಬ್ಬರು ಮಾತ್ರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ಅದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಂಜೆ 6 ಕ್ಕೆ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನಕ್ಕೆ ತೆರಳುವ ಮುಂಚೆ ಯಡಿಯೂರಪ್ಪ ತಮ್ಮ ನಿವಾಸದ ಬಳಿಯಿರುವ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.