ಯಾರೂ ಏನೇ ಮಾಡಿದರೂ ಜೆಡಿಎಸ್ ಅನ್ನು ಮುಗಿಸಲು ಸಾಧ್ಯವಿಲ್ಲ. ಸರ್ಕಾರ ಹೋಗಿದ್ದಕ್ಕೆ ಚಿಂತಿಸುವ ಅಗತ್ಯವಿಲ್ಲ. ಆದರೆ ಪಕ್ಷ ಉಳಿಸುವ ಕೆಲಸ ಆಗಬೇಕು. ಶಾಸಕ ಗೋಪಾಲಯ್ಯ ತಮ್ಮ ಹಾಗೂ ಕುಮಾರ ಸ್ವಾಮಿ ಮೇಲಿನ ತಪ್ಪು ಅಭಿಪ್ರಾಯದಿಂದಾಗಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಮ್ಮಗಳ ವಿರುದ್ಧ ಇಲ್ಲಸಲ್ಲದ ತಪ್ಪು ಹೇಳಿಕೆ ನೀಡಿ ಮುಂಬೈಗೆ ಹೋಗಿದ್ದಾರೆ. ಅತೃಪ್ತ ಶಾಸಕರ ವಿರುದ್ಧ ಸ್ಪೀಕರ್ ಅವರಿಗೆ ಈಗಾಗಲೇ ದೂರು ಸಲ್ಲಿಸಲಾಗಿದ್ದು, ಸ್ಪೀಕರ್ ರಮೇಶ್ ಕುಮಾರ್ ಅತಿಶೀಘ್ರದಲ್ಲಿ ತೀರ್ಪು ಪ್ರಕಟಿಸಲಿದ್ದಾರೆ. ಸ್ಪೀಕರ್ ತೀರ್ಪಿನ ಬಳಿಕ ಚುನಾವಣೆ ಎದುರಾಗಲಿದೆಯೋ ಇಲ್ಲವೋ ಎನ್ನುವುದು ಸ್ಪಷ್ಟವಾಗಲಿದೆ ಎಂದು ದೇವೇಗೌಡರು ಹೇಳಿದ್ದಾರೆ.