ತಮ್ಮನ್ನು ಭೇಟಿ ಮಾಡಿ ಶುಭಕೋರಲು ರಾಜ್ಯದ ಮೂಲೆ ಮೂಲೆಯಿಂದ ಅಭಿಮಾನಿಗಳು, ಕಾರ್ಯಕರ್ತರು ಬರುವುದನ್ನು ಕಂಡು ತಮಗೆ ಸಂತೋಷವಾಗಿದೆ. ಆದರೆ, ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಇಂತಹ ಸಂದರ್ಭದಲ್ಲಿ ಹೂಗುಚ್ಚ, ಹಾರ, ಶಾಲುಗಳ ಖರೀದಿಸಲು ವೆಚ್ಚ ಮಾಡುವುದು ಬೇಡ ಎಂದು ಮನವಿ ಮಾಡಿರುವ ಯಡಿಯೂರಪ್ಪ , ಅಭಿಮಾನಿಗಳು, ಕಾರ್ಯಕರ್ತರ ಹಾರೈಕೆಯೇ ತಮಗೆ ಬಹುದೊಡ್ಡ ಉಡುಗೊರೆ ಎಂದು ಹೇಳಿದ್ದಾರೆ.