'ಸಿದ್ದರಾಮಯ್ಯ, ಎಂಬಿ.ಪಾಟೀಲ್ ದಾರಿ ತಪ್ಪಿದ ಮಕ್ಕಳು: ಅತೃಪ್ತ ಶಾಸಕರು ಯಾರನ್ನೂ ಸಂಪರ್ಕಿಸಿಲ್ಲ'

ನಮ್ಮ ಗುಂಪಿನಲ್ಲಿರುವ ಯಾವ ಶಾಸಕರೂ ಸಹ ಯಾರನ್ನೂ ಸಂಪರ್ಕಿಸಿಲ್ಲ, ಮೈತ್ರಿ ನಾಯಕರೂ ಸಹ ನಮ್ಮನ್ನು ಸಂಪರ್ಕಿಸಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ....
ಸಿದ್ದರಾಮಯ್ಯ ಮತ್ತು ಎಂಬಿ ಪಾಟೀಲ್
ಸಿದ್ದರಾಮಯ್ಯ ಮತ್ತು ಎಂಬಿ ಪಾಟೀಲ್
ಬೆಂಗಳೂರು: ನಮ್ಮ ಗುಂಪಿನಲ್ಲಿರುವ ಯಾವ ಶಾಸಕರೂ ಸಹ ಯಾರನ್ನೂ ಸಂಪರ್ಕಿಸಿಲ್ಲ, ಮೈತ್ರಿ ನಾಯಕರೂ ಸಹ ನಮ್ಮನ್ನು ಸಂಪರ್ಕಿಸಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ.
ಇಬ್ಬರು ಅತೃಪ್ತ ಶಾಸಕರು ಮುಂಬಯಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಲು ಫೋನ್ ಮಾಡಿದ್ದರು ಎಂದು ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಎಟ್, ವಿಶ್ವನಾಥ್  ಎಂ.ಬಿ.ಪಾಟೀಲ್ ಸೇರಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗಳು ಹಸಿ ಸುಳ್ಳು  ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಯಾವ ಅತೃಪ್ತ ಶಾಸಕರೂ ಸಹ ಯಾರನ್ನೂ ಸಂಪರ್ಕಿಸಿಲ್ಲ. ಎಂ.ಬಿ.ಪಾಟೀಲ್ ಹೇಳುತ್ತಿರುವುದು ಹಸಿ ಸುಳ್ಳು. ಕನ್ಫ್ಯೂಸ್ ಮಾಡಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ. 
ಆದರೆ ಯಾರೂ ದಾರಿ ತಪ್ಪುವುದಿಲ್ಲ. ಅವರೇ ದಾರಿ ತಪ್ಪಿದ್ದಾರೆ. ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಸೇರಿದಂತೆ ಅವರೊಂದಿಗೆ ಇರುವವರು ದಾರಿ ತಪ್ಪಿದ ಮಕ್ಕಳು. ರಾಜ್ಯ ರಾಜಕಾರಣದ ಈ 30 ದಿನಗಳ ಬೆಳವಣಿಗೆಯಲ್ಲಿ ಅವರು ದಾರಿ ತಪ್ಪಿದ ಮಕ್ಕಳು ಎಂದು ವ್ಯಂಗ್ಯವಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com