ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಉತ್ತಮ ಆಡಳಿತ ನೀಡಲು ಸೂಚಿಸಿದ್ದು, ಮುಂಬರುವ ದಿನಗಳಲ್ಲಿ ರೈತ, ಬಡವರ ಪರ, ಜನಸಾಮಾನ್ಯರಿಗೆ ಅನುಕೂಲವಾಗುವ ಸರ್ಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.