ಅತೃಪ್ತ ಶಾಸಕರು ತಮಗೆ ಕರೆ ಮಾಡಿದ್ದರು, ಆದರೆ ನಾನು ಆ ಕರೆ ಸ್ವೀಕರಿಸಲಿಲ್ಲ ಎಂಬ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಈ ಕುರಿತು ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಮುಂಬೈನಲ್ಲಿರುವ ರೆಬೆಲ್ ಶಾಸಕ ಎಂಬಿಟಿ ನಾಗರಾಜ್ ಅವರು, 'ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ನ ಹಿರಿಯ ಮುಖಂಡರಾದ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮಾಧ್ಯಮದ ಮುಂದೆ ಸುಳ್ಳು ಸುಳ್ಳು ಮಾಹಿತಿಗಳನ್ನು ನೀಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.