ಇನ್ನು ಈ ಹಿಂದೆ ಈ ಹುದ್ದೆಯನ್ನು ಆಲಂಕರಿಸಲು ಮಾಜಿ ಸ್ಪೀಕರ್ ಕೆ.ಜೆ. ಬೋಪಯ್ಯ ಆಸಕ್ತಿ ತೋರದ ಕಾರಣ, ಕಾಗೇರಿ ಅವರ ಹೆಸರನ್ನು ರಾಜ್ಯ ಬಿಜೆಪಿ ನಾಯಕರು ಆಖೈರು ಗೊಳಿಸಿದ್ದರು. ವಿಧಾನಸಭೆಯ ಹಾಲಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಕಾರಣ ವಿಧಾನಸಭಾ ಸಭಾಧ್ಯಕ್ಷರ ಹುದ್ದೆ ತೆರವಾಗಿತ್ತು.