ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ 35,000 ಕೋಟಿ ರೂಪಾಯಿ ಅಕ್ರಮ ಗಣಿಗಾರಿಕೆ ಹಗರಣ ನಡೆದಿರುವ ಹಿನ್ನೆಲೆಯಲ್ಲಿ ಇಲ್ಲಿನ ನಾಯಕರ ಮೇಲೂ ತನಿಖೆಯ ತೂಗುಗತ್ತಿ ಎದುರಾಗಿದೆ. ಇದೇ ವೇಳೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಅಮಿತ್ ಶಾ ಗೃಹ ಸಚಿವರಾಗಿ ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವನ್ನು ಇನ್ನು ಮುಂದಿನ ದಿನಗಳಲ್ಲಿ ಕ್ಲೀನ್ ಚಿಟ್ ನೀಡುವ ಸಚಿವಾಲಯ ಎಂದು ಕರೆಯಬಹುದೆಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.