ಬೆಂಗಳೂರು: ಗ್ರಾಮ ವಾಸ್ತವ್ಯ ಮೂಲಕ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಿಂದೊಮ್ಮೆ ಸುದ್ದಿಯಾಗಿದ್ದರು. ಈ ಬಾರಿ ರಾಜ್ಯದಲ್ಲಿ ಮೈತ್ರಿ ಮೂಲಕ ಲೋಕಸಭಾ ಚುನಾವಣೆ ಎದುರಿಸಿದ್ದ ಕಾಂಗ್ರೆಸ್-ಜೆಡಿಎಸ್ಗೆ ಹೀನಾಯ ಸೋಲುಂಟಾಗಿದ್ದು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಎಚ್ಡಿ ಕುಮಾರಸ್ವಾಮಿ ಜನರಿಗೆ ಹತ್ತಿರವಾಗಲು ಇದೀಗ ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ.