' ಕ್ಲೀನ್ ಚಿಟ್ಸ್ ಗೃಹ ಸಚಿವಾಲಯ' ಪ್ರಿಯಾಂಕ್ ಖರ್ಗೆ ಹೇಳಿಕೆ ವಿರುದ್ಧ ಡಿವಿಎಸ್ ಕಿಡಿ

ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ಸಿ. ಸದಾನಂದಗೌಡ ಕಿಡಿಕಾರಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು:  ಅಮಿತ್ ಶಾ ಕೇಂದ್ರ ಗೃಹ ಸಚಿವರಾಗಿದ್ದು, ಇನ್ನು ಮೇಲೆ ಈ ಖಾತೆಗೆ ಕ್ಲೀನ್ ಚಿಟ್ ನೀಡುವ ಸಚಿವಾಲಯ ಎಂದು ಮರು ನಾಮಕರಣ ಮಾಡುವುದು ಸೂಕ್ತ ಎಂದು ಟ್ವೀಟ್ ಮಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ಸಿ. ಸದಾನಂದಗೌಡ ಕಿಡಿಕಾರಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರೇ ಕೈ ತೋರಿಸಿ ಅವಲಕ್ಷಣ ಹೇಳಿಸಿಕ್ಕೊಳಬೇಡಿ, ನಿಮ್ಮ ಪಕ್ಷದ ಚಿಹ್ನೆ ಕೈ.  ಅದರ ಅವಲಕ್ಷಣ ದೇಶದ ಜನ ಹೇಳಿ 10 ದಿನವೂ ಆಗಿಲ್ಲ , ಆಗಲೇ ಶುರು ಮಾಡಿದ್ರಲ್ಲ, ನಿಮ್ಮ ಹಿರಿಯಕ್ಕನ ಚಾಳಿ. ಮೊದಲು ನಿಮ್ಮ ಮನೆ ಸರಿ ಮಾಡ್ಕೊಳಿ ಎಂದಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ನೆಟ್ಟಿಗರು ಕೂಡಾ ಹರಿಹಾಯ್ದಿದ್ದಾರೆ. ನಿಮ್ಮ ಪಕ್ಷಕ್ಕೆ ಬೇಲ್ ಪಾರ್ಟಿ ಎಂದು ಮರು ನಾಮಕರಣ ಮಾಡುವುದು ಸೂಕ್ತ ಎಂದು ನರೇನ್ ಶೆಟ್ಟಿ ಎಂಬುವರು ಪ್ರತಿಕ್ರಿಯಿಸಿದ್ದಾರೆ. ಈ ತರ ಉಡಾಫೆ ಹೇಳಿಕೆ ನೀಡಿದ್ದಕ್ಕೆ ಜನ ಸರಿಯಾದ ಉತ್ತರ ಕೊಟ್ಟಿರೋದು ಎಂದು ಕಲ್ಲೇಶ್ ಅಚಾರ್ ಎಂಬವರು ಪ್ರತಿಕ್ರಿಯಿಸಿದ್ದಾರೆ.
I think it is better to rename your party as On Bail Party.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com