ಸದಾಶಿವನಗರದ ರಾಷ್ಟ್ರೋತ್ಥಾನ ಪರಿಷತ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ರಾಜ್ಯ ಸರ್ಕಾರದಿಂದ ಉಪ ನಗರ ರೈಲು ಯೋಜನೆ ಹಾಗೂ ಮೇಕೆದಾಟು ಯೋಜನೆಗೆ ವಿಸ್ತೃತ ವರದಿ ಸಲ್ಲಿಕೆ ಮಾಡಿದ್ದರೆ ಅದನ್ನು ಸ್ವಾಗತಿಸುತ್ತೇನೆ. ರಾಜ್ಯ ಸರ್ಕಾರ ಕೇಂದ್ರದ ಇಲಾಖೆಗೆ ವರದಿ ಸಲ್ಲಿಸಿರುವ ಮಾಹಿತಿ ತಮ್ಮ ಗಮನಕ್ಕೆ ಬಂದಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಮಾಹಿತಿ ಪಡೆಯುತ್ತೇನೆ ಎಂದು ಮುಜುಗರ ತಪ್ಪಿಸಿಕೊಳ್ಳಲು ಯತ್ನಿಸಿದರು.