ಬೆಂಗಳೂರು: ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ದಲಿತ ನಾಯಕರನ್ನು ಕಡೆಗಣಿಸಲಾಗಿದೆ, ರಾಜ್ಯದ ಯಾವ ಸಂಸದರಿಗೆ ಸಹ ಸಂಪುಟದಲ್ಲಿ ಸ್ಥಾನಮಾನ ನೀಡಿಲ್ಲ ಎಂದು ಟ್ವಿಟ್ಟರ್ ನಲ್ಲಿ ತಮ್ಮ ಆಕ್ರೋಶ, ಅಸಮಾಧಾನ ತೋಡಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.
ಮಾನ್ಯ ಟ್ವಿಟರ್ ರಾಮಯ್ಯನವರೇ, ದಲಿತರ ಮೇಲಿರುವ ನಿಮ್ಮ ಪ್ರೀತಿಯನ್ನು ಬರೀ ಟ್ವಿಟರ್ ಮೂಲಕ ತೋರಿಸಬೇಡಿ. ಜಿ.ಪರಮೇಶ್ವರ್ ಅವರು ದಲಿತರು ಎಂಬ ಕಾರಣಕ್ಕೆ ಸಿಎಂ ಸ್ಥಾನ ತಪ್ಪಿಸಿದ್ದು ತಾವೇ ಎಂದು ರಾಜ್ಯದ ಜನತೆಗೆ ಗೊತ್ತಿದೆ. ದಲಿತರ ಮೇಲೆ ತಮಗೆ ನಿಜಕ್ಕೂ ಕಾಳಜಿ ಇದ್ದರೆ ಸೋತಿರುವ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸಿಎಂ ಮಾಡಿ ತೋರಿಸಿ. https://t.co/4Q2GiwtdIQ