ಜಿಂದಾಲ್ ಉಕ್ಕು ಕಾರ್ಖಾನೆಗೆ 3,666 ಎಕರೆ ಭೂಮಿ ನೀಡುವ ರಾಜ್ಯ ಸಚಿವ ಸಂಪುಟ ನಿರ್ಧಾರ ಸರಿಯಾದುದಲ್ಲ ಎಂದು ಪಾಟೀಲ್ ಪುನರುಚ್ಚರಿಸಿದರು. ರಾಜ್ಯ ಸರ್ಕಾರಕ್ಕೆ ಜಿಂದಾಲ್ ಉಕ್ಕು ಸಂಸ್ಥೆ ಯಾವುದೇ ಹಣ ಬಾಕಿ ಉಳಿಸಿಕೊಂಡಿಲ್ಲ ಎಂಬ ಸಚಿವ ಕೆ.ಜೆ. ಜಾರ್ಜ್ ಹೇಳಿಕೆ ಸತ್ಯಕ್ಕೆ ದೂರವಾದದ್ದು. ಕಂಪನಿ ರಾಜ್ಯ ಸರ್ಕಾರಕ್ಕೆ ಹಣ ಬಾಕಿ ಉಳಿಸಿಕೊಂಡಿದೆ, ಈ ಕುರಿತು ದಾಖಲೆಗಳ ಸಮೇತ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಸಮರ್ಥಿಸಿಕೊಂಡ ಹೆಚ್.ಕೆ. ಪಾಟೀಲ್, ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.