ಸಂಪುಟ ಪುನಾರಚನೆ ವೇಳೆ ರೆಬೆಲ್ ರಾಮಲಿಂಗಾ ರೆಡ್ಡಿಗೆ ಸಚಿವ ಸ್ಥಾನ: ಸಿದ್ದರಾಮಯ್ಯ

ಸಂಪುಟ ಪುನಾರಚನೆ ವೇಳೆ ಸ್ಥಾನ ನೀಡುವುದಾಗಿ ಮೊದಲೇ ಹೇಳಿದ್ದೆ, ಅದರಂತೆ ಮುಂಬರುವ ಸಂಪುಟ ವಿಸ್ತರಣೆ ವೇಳೆ ರಾಮಲಿಂಗಾ ರೆಡ್ಡಿ ಅವರಿಗೆ ಸ್ಥಾನ ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಸಂಪುಟ ಪುನಾರಚನೆ ವೇಳೆ ಸ್ಥಾನ ನೀಡುವುದಾಗಿ ಮೊದಲೇ ಹೇಳಿದ್ದೆ, ಅದರಂತೆ ಮುಂಬರುವ ಸಂಪುಟ ವಿಸ್ತರಣೆ ವೇಳೆ ರಾಮಲಿಂಗಾ ರೆಡ್ಡಿ ಅವರಿಗೆ ಸ್ಥಾನ ನೀಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಸಂಪುಟ ಪುನಾರಚನೆ ವೇಳೆ ರಾಮಲಿಂಗಾ ರೆಡ್ಡಿ ಅವರಿಗೆ ಶಿವಳ್ಳಿ ಅವರ ಸ್ಥಾನವನ್ನು ನೀಡಲಾಗುವುದು, ಈ ಸಂಬಂಧ ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತನಾಡಲಾಗುವುದು ಎಂದು ಹೇಳಿದ್ದಾರೆ. 
ಈ ವೇಳೆ ರಾಮಲಿಂಗಾರೆಡ್ಡಿ ಅವರ ಅಸಮಾಧಾನ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ನಾನೇ ರಾಮಲಿಂಗಾರೆಡ್ಡಿ ಅವರ ಜೊತೆ ಮಾತನಾಡುತ್ತೇನೆ. ಪುನಾರಚನೆ ಮಾಡುವಾಗ ರಾಮಲಿಂಗಾರೆಡ್ಡಿ ಅವರಿಗೆ ಮಂತ್ರಿ ಸ್ಥಾನ ನೀಡುವುದಾಗಿ ಹೇಳಲಾಗಿತ್ತು. ಆದರೆ ಈಗ ಪುನಾರಚನೆ ಮಾಡುತ್ತಿಲ್ಲ.
ನಾನೆಂದೂ ಖರ್ಗೆ, ಪರಮೇಶ್ವರ್‌ ಅವರು ಮುಖ್ಯಮಂತ್ರಿ ಆಗಬಾರದು ಎಂದು ಹೇಳೇ ಇಲ್ಲ. 2013 ರಲ್ಲಿ ನಮ್ಮ ಪಕ್ಷದ ಶಾಸಕರು ಹೇಳಿದ್ದರು, ಹೈಕಮಾಂಡ್‌ ನವರು ಹೇಳಿದ್ದರು. ಹಾಗಾಗಿ ಮುಖ್ಯಮಂತ್ರಿ ಆಗಿದ್ದೆ. ಎಲ್ಲರಿಗೂ ಅವಕಾಶ ಸಿಗಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com