ಖರ್ಗೆಯಾಗಲಿ, ಪರಮೇಶ್ವರ್ ಆಗಲಿ ಸಿಎಂ ಆಗುವುದು ಬೇಡ ಎಂದು ನಾವು ಹೇಳಲೇ ಇಲ್ಲ: ಸಿದ್ದರಾಮಯ್ಯ

ದಲಿತ ನಾಯಕರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡುವ ಸಂಬಂಧ ನೀಡಿದ್ದ ಹೇಳಿಕೆ ಮತ್ತು ಅದಕ್ಕೆ ...
ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದಲಿತ ನಾಯಕರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡುವ ಸಂಬಂಧ ನೀಡಿದ್ದ ಹೇಳಿಕೆ ಮತ್ತು ಅದಕ್ಕೆ ಬಿಜೆಪಿಯಿಂದ ಬಂದ ಪ್ರತಿಕ್ರಿಯೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಮುಂದೆ ಉತ್ತರಿಸಿದ್ದಾರೆ.
ಮೊನ್ನೆ ನಡೆದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಚಿವ ಸಂಪುಟ ರಚನೆಯಲ್ಲಿ ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಅವಕಾಶ ಕೊಟ್ಟಿಲ್ಲ. ಒಬ್ಬರೇ ಒಬ್ಬ ಅಲ್ಪಸಂಖ್ಯಾತರನ್ನು ಮಂತ್ರಿ ಮಾಡಿರುವುದು, ಹಿಂದುಳಿದ ವರ್ಗದಲ್ಲಿ ಕೂಡ ಒಬ್ಬರಿಗೊ, ಇಬ್ಬರಿಗೊ ಮಂತ್ರಿ ಸ್ಥಾನ ನೀಡಿದ್ದಾರೆ. ದಲಿತರಿಗೂ ಮೂರ್ನಾಲ್ಕು ಸಂಸದರನ್ನು ಮಂತ್ರಿಯನ್ನಾಗಿ ಮಾಡಿದ್ದಾರಷ್ಟೆ,57 ಜನರಲ್ಲಿ ಕೆಲವರಿಗೆ ನಾಮಕಾವಸ್ಥೆ ಮಂತ್ರಿಗಿರಿ ನೀಡಿದರೆ, ಕರ್ನಾಟಕದಿಂದ ಒಬ್ಬರಿಗೂ ದಲಿತ, ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ಕೊಟ್ಟಿಲ್ಲ, ಅದು ಅನ್ಯಾಯ, ಸಾಮಾಜಿಕ ನ್ಯಾಯ ಅಲ್ಲ ಎಂದು ಟ್ವಿಟ್ಟರ್ ನಲ್ಲಿ ನಾನು ಹೇಳಿದ್ದೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com