ಲೋಕಸಭೆ ಚುನಾವಣೆಯಲ್ಲಿ ಗೆದ್ದ 25 ಸಂಸದರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ, ಮೈತ್ರಿ ಸರ್ಕಾರ ಸತ್ತಿದೆ, ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ವಿಧಾನಸೌಧ ಖಾಲಿ ಹೊಡೆಯುತ್ತಿದೆ, ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದೆ, ಇಷ್ಟು ದಿನ ಐಷಾರಾಮಿ ಹೋಟೆಲ್ ನಲ್ಲಿ ತಂಗುತ್ತಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಹಳ್ಳಿಗಳಿಗೆ ಏಕಾ ಏಕಿ ಭೇಟಿ ಮಾಡಲು ನಿರ್ಧರಿಸಿದ್ದಾರೆ, ಅದರ ಬದಲು ಬರ ಪ್ರದೇಶಗಳಿಗೆ ಪ್ರವಾಸ ಮಾಡಲಿ ಎಂದು ಸಲಹೆ ನೀಡಿದ್ದಾರೆ.