ಕಾಂಗ್ರೆಸ್ ನಲ್ಲಿ ಇನ್ನು ಕೆಲವರಿಗೆ ಸಿದ್ದರಾಮಯ್ಯ ನಾಯಕತ್ವದ ಮೇಲೆ ವಿಶ್ವಾಸವಿದೆ. ಆದರೆ ಅವರೊಬ್ಬರೇ ಕಾಂಗ್ರೆಸ್ ನ ಉಸ್ತುವಾರಿ ನೋಡಿಕೊಳ್ಳುವುದಲ್ಲ, ಬೇರೆ ನಾಯಕರುಗಳು ಸಹ ಬೇಕು ಎನ್ನುವುದು ಕೆಳಮಟ್ಟದ ನಾಯಕರ ಅಭಿಪ್ರಾಯ. ಆದರೆ ಇಡೀ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ನಿಯಂತ್ರಿಸುತ್ತಿರುವವರು ಯಾರು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೇ, ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರೇ, ಕಾಂಗ್ರೆಸ್ ನಲ್ಲಿರುವವರಿಗೇ ಗೊತ್ತಿಲ್ಲ ಎನ್ನುತ್ತಾರೆ ರಾಜಕೀಯ ವಿಶ್ಲೇಷಕ ಮೋಹನ್ ರಾಮ್.