ಇನ್ನೆರಡು ದಿನಗಳಲ್ಲಿ ವಿಶ್ವನಾಥ್ ರಾಜಿನಾಮೆ ವಾಪಸ್: ಪ್ರಜ್ವಲ್ ರೇವಣ್ಣ

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್‌.ವಿಶ್ವನಾಥ್‌ ಅವರು ಇನ್ನು ಎರಡು ಮೂರುದಿನಗಳಲ್ಲಿ ಅವರು ರಾಜೀನಾಮೆ ವಾಪಸ್‌ ...
ಎಚ್.ವಿಶ್ವನಾಥ್ ಮತ್ತು ಪ್ರಜ್ವಲ್ ರೇವಣ್ಣ
ಎಚ್.ವಿಶ್ವನಾಥ್ ಮತ್ತು ಪ್ರಜ್ವಲ್ ರೇವಣ್ಣ
ಬೆಂಗಳೂರು/ ಹಾಸನ: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್‌.ವಿಶ್ವನಾಥ್‌ ಅವರು ಇನ್ನು ಎರಡ್ಮೂರು ದಿನಗಳಲ್ಲಿ ಅವರು ರಾಜೀನಾಮೆ ವಾಪಸ್‌ ಪಡೆಯಲಿದ್ದಾರೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್‌ ಅವರು ಕೆಲವು ಸಣ್ಣಪುಟ್ಟ ವಿಚಾರಗಳಿಗೆ ಬೇಸರಗೊಂಡಿದ್ದಾರೆ. ಜೆಡಿಎಲ್‌ಪಿ ಸಭೆಯಲ್ಲಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸೇರಿದಂತೆ ಎಲ್ಲ ಶಾಸಕರು ವಿಶ್ವನಾಥ್‌ ಅವರ ಮನವೊಲಿಸಲಿಸಲಿದ್ದಾರೆ. ಮುಂದೆ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಮುನ್ನಡೆಸಲಾಗುತ್ತದೆ ಎಂದರು.
ಇರುವ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆ ಹರಿಸಿಕೊಂಡು ವಿಶ್ವನಾಥ್ ಅವರ ನೇತೃತ್ವದಲ್ಲಿಯೇ ಪಕ್ಷವನ್ನು ಮುಂದುವರಿಸಿಕೊಂಡು ಹೋಗಲಾಗುತ್ತದೆ ಎಂದು ಜೆಡಿಸ್ ಹಿರಿಯ ನಾಯಕ ವೈಎಸ್ ವಿ ದತ್ತ ಹೇಳಿದ್ದಾರೆ. ಮುಂದಿನ ಎರಡು ದಿನದಳಲ್ಲಿ ವಿಶ್ವನಾಥ್ ತಮ್ಮ ರಾಜಿನಾಮೆ ವಾಪಸ್ ಪಡೆಯಲಿದ್ದಾರೆ ಎಂದು ದತ್ತ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com