ಮೈತ್ರಿ ಸರ್ಕಾರಕ್ಕೆ ಧಕ್ಕೆ ಉಂಟಾಗದಂತೆ ಜೆಡಿಎಸ್ ಪಕ್ಷವನ್ನು ಬೇರುಮಟ್ಟದಿಂದ ಸಂಘಟನೆ ಮಾಡಲಾಗುವುದು ಎಂದು ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ. ಪ್ರಾದೇಶಿಕ ಪಕ್ಷವ್ಬಾದ ಜೆಡಿಎಸ್ ನ್ನು ಕೊಲ್ಲುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಯಾರು ಪಕ್ಷ ತೊರೆದರೂ ಹೆದರುವುದುಲ್ಲ. ಯಾವುದೇ ಸಮುದಾಯದವರಾದರೂ ನಿಷ್ಠೆಯಿಂದ ಇರಿ, ಪಕ್ಷಕ್ಕೆ ಮೋಸ ಮಾಡಬೇಡಿ, ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿ ನೀಡಲಾಗುವುದು ಎಂದು ದೇವೇಗೌಡ ಹೇಳಿದ್ದಾರೆ.