ಕಳೆದ ಬಾರಿ ಪಶ್ಚಿಮಘಟ್ಟದಲ್ಲಿ ನಡೆದ ಮೇಘಸ್ಫೋಟ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕರು , ಸಂಘ ಸಂಸ್ಥೆಗಳು ನೀಡಿದ ದೇಣಿಗೆಯನ್ನೇ ಸರ್ಕಾರ ಸಮರ್ಪಕವಾಗಿ ಬಳಕೆ ಮಾಡಿಲ್ಲ. ಕೊಡಗು ಸಂತ್ರಸ್ಥರಿಗಾಗಿ ಸಾರ್ವಜನಿಕರು ಕಳುಹಿಸಿದ್ದ ಬಟ್ಟೆ, ದಿನಬಳಕೆ ವಸ್ತುಗಳೆಲ್ಲ ಕೊಡಗಿನ ಕಲ್ಯಾಣ ಮಂಟಪಗಳಲ್ಲಿ ಹಾಗೆಯೇ ಕೊಳೆಯುತ್ತಾ ಬಿದ್ದಿವೆ. ಪರಿಹಾರ, ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳದ ಸರ್ಕಾರ, ಎಲ್ಲದಕ್ಕೂ ಕೇಂದ್ರ ಸರ್ಕಾರವೇ ಹೊಣೆ ಎಂದು ಬೊಟ್ಟು ಮಾಡುವುದು ಎಷ್ಟು ಸರಿ ಎಂದು ಕೋಟಾ ಶ್ರೀನಿವಾಸ ಪೂಜಾರಿ ಪ್ರಶ್ನಿಸಿದರು.