ಬೆಳಗ್ಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕುವ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಹಿರಂಗ ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕುವ ಅಗತ್ಯತೆಯಿಲ್ಲ. ನಾನೇ ಬಹಿರಂಗ ಚರ್ಚೆಗೆ ಸಿದ್ದನಿದ್ದು ಜಿಂದಾಲ್ ಭೂಮಿ ಹಂಚಿಕೆ,ರೈತರ ಸಾಲಮನ್ನ.ಬರದ ಬಗ್ಗೆ ಚರ್ಚೆಗೆ ಸಿದ್ದನಿದ್ದೇನೆ.ತಾವೇ ಸ್ಥಳ ಹಾಗೂ ಸಮಯವನ್ನು ನಿಗದಿ ಮಾಡಿ ಎಂದು ಬಿಜೆಪಿ ನಾಯಕರಿಗೆ ಟ್ವೀಟರ್ ಮೂಲಕ ಸವಾಲು ಹಾಕಿದ್ದಾರೆ.