ಇದೇ ವೇಳೆ ರಾಹುಲ್ ಗಾಂಧಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರಿಗೆ ಶುಭಕೋರಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಅವರು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರಿಂದ ಅವರಿಗೆ ಕೆಪಿಸಿಸಿ ನೋಟಿಸ್ ನೀಡಿತ್ತು. ಆದರೆ ಬೇಗ್ ಅವರು ಅದಕ್ಕೆ ಉತ್ತರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕೈಗೊಳ್ಳಲು ಕೆಪಿಸಿಸಿ ಶಿಫಾರಸು ಮಾಡಿತ್ತು. ಅದರಂತೆ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷದಲ್ಲಿ ಯಾವುದೇ ಅಶಿಸ್ತನ್ನು ಸಹಿಸುವುದಿಲ್ಲ ಎಂದು ಹೇಳಿದರು.