ಇದೇ ಸಂದರ್ಭದಲ್ಲಿ ಐಎಂಎ ಹಗರಣ ಆರೋಪಿ ಮನ್ಸೂರ್ ಖಾನ್, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಭೋಜನ ಸ್ವೀಕರಿಸಿದ್ದರು ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಕಿಡಿಕಾರಿದ ಅವರು, ಹಗರಣದಲ್ಲಿ ಯಾರುಯಾರು ಭಾಗಿಯಾಗಿದ್ದಾರೆ ಎನ್ನುವುದನ್ನು ಮನ್ಸೂರ್ ಖಾನ್ ಅವರೇ ಖುದ್ದಾಗಿ ಬಂದು ಪೊಲೀಸರಿಗೆ ಹೇಳುತ್ತೇನೆ ಎಂದಿದ್ದಾನೆ. ಮನ್ಸೂರ್ ಖಾನ್ ಶರಣಾಗತಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆಗ ಅವನೇ ಎಲ್ಲರ ಹೆಸರು ಹೇಳುತ್ತಾನೆ. ಅವನು ಯಾರಯಾರ ಹೆಸರನ್ನು ಹೇಳುತ್ತಾನೆ ಎನ್ನುವುದನ್ನು ಕಾದುನೋಡೋಣ. ಮುಖ್ಯಮಂತ್ರಿ ಅವನಿಂದ ಎಷ್ಟು ತಗೊಂಡಿದ್ದಾರೆ, ಇನ್ನೊಬ್ಬರು ಎಷ್ಟು ತಗೊಂಡಿದ್ದರು ಎನ್ನುವುದನ್ನು ಆತನೇ ಹೇಳಲಿ ಎಂದರು.