ಒಂದು ಕಡೆ ಪಕ್ಷ ಸಂಘಟನೆಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಚಾಲನೆ ನೀಡಿದ್ದು, ಜೆಡಿಎಸ್ ರಾಜ್ಯ ಘಟಕಕ್ಕೆ ಸಾರಥಿಯ ನೇಮಕದ ಬಗ್ಗೆ ಇನ್ನೂ ನಿಗೂಢತೆಯನ್ನು ಕಾಯ್ದುಕೊಂಡಿದ್ದಾರೆ. ಶಾಸಕ ಹೆಚ್.ವಿಶ್ವನಾಥ್, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದ್ದರೂ ಅದನ್ನು ಸ್ವೀಕರಿಸಲು ದೇವೇಗೌಡರು ಇನ್ನೂ ಮನಸು ಮಾಡಿಲ್ಲ. ಹೀಗಾಗಿ ಜೆಡಿಎಸ್ ರಾಜ್ಯ ಘಟಕದ ಚುಕ್ಕಾಣಿ ಹಿಡಿಯುವವರು ಯಾರು ಎಂಬ ಪ್ರಶ್ನೆ ಉದ್ಭವಾಗಿರುವ ಸಂದರ್ಭದಲ್ಲಿಯೇ ವಿಶ್ವನಾಥ್, ನೀಡಿರುವ ಸಲಹೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.