ಸಿಎಂ ಅವರ ಈ ಮಾತಿಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ರಾಜ್ಯದ ಆರೂವರೆ ಕೋಟಿ ಜನರಿಗೆ ಸಿಎಂ ಆಗಿರುವ ವ್ಯಕ್ತಿಯಿಂದ ಇಂತಹ ಮಾತುಗಳನ್ನು ಜನರು ನಿರೀಕ್ಷಿಸುವುದಿಲ್ಲ. ಇಂತಹ ಮನೋಧರ್ಮ ಇಟ್ಟುಕೊಂಡು ಅವರು ಗ್ರಾಮ ವಾಸ್ತವ್ಯ ಮಾಡುವುದು ಯಾರನ್ನು ಮೆಚ್ಚಿಸಲು? ಜನರ ಸಮಸ್ಯೆಯನ್ನು ಆಲಿಸಿ ಅದಕ್ಕೆ ಪರಿಹಾರ ನೀಡಲು ಅವರು ಗ್ರಾಮ ವಾಸ್ತವ್ಯಕ್ಕೆ ಹೊರಟಿರುವುದು, ಆ ಕೆಲಸ ಮಾಡಲಿ ಎಂದು ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಿಸಿದ್ದಾರೆ.