ಕುಮಾರಸ್ವಾಮಿ ಅವರ ಮಹತ್ವಾಕಾಂಕ್ಷೆಯ ರೈತರ ಸಾಲ ಮನ್ನಾ ಯೋಜನೆ ರೈತಪರ ಯೋಜನೆಯಾಗಿದ್ದು, ಇದನ್ನು ವಿರೋಧಿಗಳು ಬೇರೆಯದ್ದೇ ರೀತಿಯಲ್ಲಿ ವ್ಯಾಖ್ಯಾನಿಸಿದರು. 2018 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ವಿರೋಧಿಗಳು ಮಾಡಿದ ಅಪಪ್ರಚಾರದಿಂದಾಗಿ ಪಕ್ಷಕ್ಕೆ 37 ಸ್ಥಾನಗಳು ಬರುವಂತಾಯಿತು. ಆದರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅನುಷ್ಠಾನಕ್ಕೆ ಬಂದಂತಹ ಎಲ್ಲಾ ಯೋಜನೆ, ಕಾರ್ಯಕ್ರಮಗಳನ್ನು ಕುಮಾರಸ್ವಾಮಿ ಮುಂದುವರೆಸಿ ಸಾಲಮನ್ನಾ ಯೋಜನೆ ನಿರ್ಧಾರ ಕೈಗೊಂಡರು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು.