ಮಗನ ಸೋಲಿನ ದ್ವೇಷದಿಂದ ಜಿಲ್ಲೆಯನ್ನು ಕಡೆಗಣಿಸಬೇಡಿ: ಚಲವರಾಯಸ್ವಾಮಿ

ನಿಮ್ಮ ವೈಯಕ್ತಿಕ ಅಸಮಾಧಾನ ಏನೇ ಇರಲಿ, ಲೋಕಸಭೆ ಚುನಾವಣೆಯಲ್ಲಿ ಮಗ ನಿಖಿಲ್ ಸೋತ ಎಂಬ ಕಾರಣದಿಂದಾಗಿ ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ..
ಚಲುವರಾಯಸ್ವಾಮಿ
ಚಲುವರಾಯಸ್ವಾಮಿ
ಮಂಡ್ಯ: ನಿಮ್ಮ ವೈಯಕ್ತಿಕ ಅಸಮಾಧಾನ ಏನೇ ಇರಲಿ, ಲೋಕಸಭೆ ಚುನಾವಣೆಯಲ್ಲಿ ಮಗ ನಿಖಿಲ್ ಸೋತ ಎಂಬ ಕಾರಣದಿಂದಾಗಿ ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ಮುಖ್ಯಮಂತ್ರಿಯವರಿಗೆ ಮಾಜಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದಲ್ಲಿ ರೈತರ ಬೆಳೆಗೆ ಕಾವೇರಿ ನೀರು ಬಿಡುವ ಬಗ್ಗೆ ಮಾತನಾಡಿದ ಅವರು, ರೈತರಿಗೆ 10-15 ದಿನ ನೀರು ಬಿಡುವ ಅವಕಾಶ ಇತ್ತು. ದುರಾದೃಷ್ಟವೆಂದರೇ ಜಿಲ್ಲೆಯ ಒಬ್ಬ ಜನಪ್ರತಿನಿಧಿಯೂ ಕಾವೇರಿ ಸಭೆ ಕರೆಯಲಿಲ್ಲ. ಮುಖ್ಯಮಂತ್ರಿ ಬಳಿಯೂ ಜಿಲ್ಲೆಯ ಸಮಸ್ಯೆ ಬಗ್ಗೆ ಹೇಳಲಿಲ್ಲ. ಅದಕ್ಕೆ ಕಾರಣ ಕಳೆದ ಚುನಾವಣೆಯಲ್ಲಿ ವ್ಯತ್ಯಾಸ ಮಾಡಿದರು ಎಂದು ಸಿಟ್ಟು ಬಂದಿದೆಯೋ, ಜನಕ್ಕೆ ಸಹಾಯ ಮಾಡೋದು ಬೇಡ ಎಂಬ ಅಸಮಾಧಾನ ಆಗಿದೆಯೋ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
ಈಗ ನೀರನ್ನು ಬಿಡಲು ಪ್ರಾಧಿಕಾರದ ಒಪ್ಪಿಗೆ ಬೇಕು ಎಂಬ ಸಬೂಬು ಹೇಳುತ್ತಿದ್ದಾರೆ. ಪ್ರಾಧಿಕಾರ ರಚನೆ ಆದ ಮೇಲೂ ಚುನಾವಣೆಗೆ ಮುಂಚೆ ಪ್ರಾಧಿಕಾರದ ಅನುಮತಿ ಪಡೆಯದೆ ಮೂರು ಬಾರಿ ನೀರು ಕೊಟ್ಟಿದ್ದಾರೆ. ನಂತರ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ ನಿದರ್ಶನ ಇದೇ ಸರ್ಕಾರದಲ್ಲಿ ಇದೆ. 
ಈ ಬಾರಿಯೂ ನೀರು ಬಿಡಲು ಅವಕಾಶ ಇದ್ದರೂ ನೀರು ಬಿಟ್ಟಿಲ್ಲ. ಇರುವ ನೀರನ್ನು ಬಳಸಬೇಡಿ ಎಂದು ಪ್ರಾಧಿಕಾರ ಹೇಳಿಲ್ಲ. ಬೆಳೆಗೂ ನೀರು ಕೊಟ್ಟು ಕುಡಿಯುವುದಕ್ಕೂ ನೀರು ಉಳಿಸಿಕೊಳ್ಳಬಹುದಿತ್ತು. ಆದರೆ ಖಡಾಖಂಡಿತವಾಗಿ ನೀರು ಬಿಡೋದು ಬೇಡ ಎಂದು ತೀರ್ಮಾನಿಸಿದ್ದಾರೆ ಎಂದು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com