ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದಲ್ಲಿ ರೈತರ ಬೆಳೆಗೆ ಕಾವೇರಿ ನೀರು ಬಿಡುವ ಬಗ್ಗೆ ಮಾತನಾಡಿದ ಅವರು, ರೈತರಿಗೆ 10-15 ದಿನ ನೀರು ಬಿಡುವ ಅವಕಾಶ ಇತ್ತು. ದುರಾದೃಷ್ಟವೆಂದರೇ ಜಿಲ್ಲೆಯ ಒಬ್ಬ ಜನಪ್ರತಿನಿಧಿಯೂ ಕಾವೇರಿ ಸಭೆ ಕರೆಯಲಿಲ್ಲ. ಮುಖ್ಯಮಂತ್ರಿ ಬಳಿಯೂ ಜಿಲ್ಲೆಯ ಸಮಸ್ಯೆ ಬಗ್ಗೆ ಹೇಳಲಿಲ್ಲ. ಅದಕ್ಕೆ ಕಾರಣ ಕಳೆದ ಚುನಾವಣೆಯಲ್ಲಿ ವ್ಯತ್ಯಾಸ ಮಾಡಿದರು ಎಂದು ಸಿಟ್ಟು ಬಂದಿದೆಯೋ, ಜನಕ್ಕೆ ಸಹಾಯ ಮಾಡೋದು ಬೇಡ ಎಂಬ ಅಸಮಾಧಾನ ಆಗಿದೆಯೋ ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.