ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಪಾದಯಾತ್ರೆ ಕೈಗೊಂಡಿದ್ದಾರೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಅವರು, ಬಿಜೆಪಿ ನಾಯಕರು ಏನು ಬೇಕಾದರೂ ತಿಳಿದುಕೊಳ್ಳಲಿ. ನಾವು ಪಕ್ಷ ಸಂಘಟನೆಗಾಗಿ ಪಾದಯಾತ್ರೆ ಮಾಡುತ್ತಿದ್ದೇವೆ. ನಮ್ಮ ಪಾದಯಾತ್ರೆಯಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗದಂತೆ, ಕಿಂಚಿತ್ತೂ ತೊಂದರೆ ಆಗದಂತೆ ಪಾದಯಾತ್ರೆಯನ್ನು ಸ್ವತಃ ತಾವೇ ಸಂಘಟನೆ ಮಾಡುವುದಾಗಿ ದೇವೇಗೌಡ ಹೇಳಿದರು.