ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಕೊಟ್ಟಿರುವ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸುವುದು ಬೇಡ. 2001, ಡಿಸೆಂಬರ್ 14ನೇ ತಾರೀಖು ಸಂಸತ್ತು ಮೇಲೆ ದಾಳಿಯಾದಾಗ ಪಾಕಿಸ್ತಾನದ ಗಡಿಯೊಳಗೆ ಹೋಗಿ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಬೇಕು ಎನ್ನುವ ಆಕ್ರೋಶ ದೇಶಾದ್ಯಂತ ವ್ಯಕ್ತವಾಗಿತ್ತು. ಆರ್ಯ ಭಾರತ್ ಎನ್ನುವ ಸೇನೆಯನ್ನು ಗಡಿಯಲ್ಲಿ ನಿಯೋಜನೆ ಮಾಡಿ ಯುದ್ಧಕ್ಕೂ ಸನ್ನದ್ಧವಾಗಿತ್ತು. ಆದರೆ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರು ಗಡಿಯನ್ನು ದಾಟಿ ಹೋಗಲು ಅನುಮತಿ ನೀಡಿರಲಿಲ್ಲ ಎಂದು ಪ್ರತಾಪ್ ಸಿಂಹ ನೆನಪು ಮಾಡಿಕೊಂಡರು.