ಹುಬ್ಬಳ್ಳಿ: ಪುಲ್ವಾಮಾ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆ ನಡೆಸಿರುವ ದಾಳಿ ಬಗ್ಗೆ ಸಾಕ್ಷಿ ಕೇಳಿಲ್ಲ ಎಂದು ಗೃಹ ಸಚಿವ ಎಂ . ಬಿ. ಪಾಟೀಲ್ ಹೇಳಿದ್ದಾರೆ.
ಭಾರತೀಯ ವಾಯುಸೇನೆ ನಡೆಸಿದ ದಾಳಿ ಬಗ್ಗೆ ಪ್ರಿಯಾಂಕ್ ಖರ್ಗೆ, ಶಾಸಕ ರಾಘವೇಂದ್ರ ಹಿಟ್ನಾಳ್ ಸಾಕ್ಷಿ ಕೇಳಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಅವರೇಕೆ ಹಾಗೆ ಹೇಳಿದ್ದಾರೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ, ಅವರ ಹೇಳಿಕೆ ಕುರಿತಂತೆ ಸಮಜಾಯಿಸಿ ನೀಡಲು ತಿಳಿಸಲಾಗಿದೆ ಎಂದರು.
Advertisement