ಬೆಂಗಳೂರು: ಪಕ್ಷದಲ್ಲಿ ತಮ್ಮ ತಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಸೋದರ ಹೆಚ್ ಡಿ ಕುಮಾರಸ್ವಾಮಿಯವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ.
ಶಿವರಾತ್ರಿ ಅಂಗವಾಗಿ ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಸ್ಥಾನಕ್ಕ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಮನ್ವಯ ಸಮಿತಿ ಸಭೆಯಲ್ಲಿ ಎರಡೂ ಪಕ್ಷಗಳ ಹಿರಿಯ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಹೇಳಿದರು.