ಮಂಡ್ಯದಿಂದ ಸುಮಲತಾ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಆಸಕ್ತಿ ತೋರಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡ, ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳಾಗುವುದು ತಪ್ಪೇನು ಅಲ್ಲ, ಮಂಡ್ಯದಿಂದ ಸ್ಪರ್ಧಿಸಲು ನಿಖಿಲ್ ಕೂಡ ಆಕಾಂಕ್ಷಿಯಾಗಿದ್ದಾರೆ. ಪ್ರಜ್ವಲ್ ರೇವಣ್ಣ ಬಿ.ಇ ಮುಕ್ತಾಯಗೊಳಿಸಿದ ಬಳಿಕ ಹಾಸನದ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ಈಗ ನಿಖಿಲ್ ಸಹ ಸಕ್ರಿಯ ರಾಜಕಾರಣದಲ್ಲಿ ಆಸಕ್ತಿ ತೋರಿದ್ದಾರೆ. ನಾನು ಪ್ರಜ್ವಲ್ ನ್ನು ಮಾತ್ರ ಉತ್ತೇಜಿಸುತ್ತಿದ್ದೇನೆ ಎಂಬ ಭಾವನೆ ನಿಖಿಲ್ ಗೆ ಬರಬಾರದು. ಆದ್ದರಿಂದ ನಿಖಿಲ್ ಸ್ಪರ್ಧೆಗೂ ನನ್ನ ಸಹಮತವಿದೆ ಎಂದು ದೇವೇಗೌಡ ತಿಳಿಸಿದ್ದಾರೆ.