ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಉಮೇಶ್ ಜಾಧವ್ ರನ್ನು ನಾನು ಸಜ್ಜನ ರಾಜಕಾರಣಿ ಎಂದು ಭಾವಿಸಿದ್ದೆ. ಆದರೆ ಅವರೂ ಕೂಡ ಅಧಿಕಾರದಾಸೆ ಮತ್ತು ಹಣದ ಆಮಿಷಕ್ಕೆ ಬಲಿಯಾಗಿ ಪಕ್ಷದ ಬೆನ್ನಿಗೆ ಚೂರಿ ಹಾಕುತ್ತಾರೆ ಎಂದು ಭಾವಿಸಿರಲಿಲ್ಲ. ಉಮೇಶ್ ಜಾಧವ್ ರನ್ನು ಬೆಳೆಸಿದ್ದೇ ಕಾಂಗ್ರೆಸ್ ಪಕ್ಷ. ಪಕ್ಷ ಅವರಿಗೆ ಎಲ್ಲವನ್ನೂ ನೀಡಿದೆ. ಆದರೆ ಲೋಕಸಭಾ ಚುನಾವಣೆಯ ಈ ಹೊತ್ತಿನಲ್ಲಿ ಅವರು ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಇಂತಹ ಅಧಿಕಾರದಾಸೆಗೆ ತಮ್ಮನ್ನು ತಾವು ಮಾರಿಕೊಳ್ಳುವ ರಾಜಕಾರಣಿಗಳನ್ನು ಜನ ತಿರಸ್ಕರಿಸಬೇಕು. ಮುಂದಿನ ದಿನಗಳಲ್ಲಿ ಉಮೇಶ್ ಜಾಧವ್ ಅವರೇ ತಮ್ಮ ತಪ್ಪಿಗೆ ಶಿಕ್ಷೆ ಅನುಭವಿಸಲಿದ್ದಾರೆ. ಜನ ಖಂಡಿತಾ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಟೀಕಿಸಿದರು.