ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ

ವೀರಶೈವ-ಲಿಂಗಾಯತ ಸಮುದಾಯದ ಸರ್ಕಾರಿ ನೌಕರರನ್ನು ಸರ್ಕಾರ ಕಡೆಗಣಿಸುತ್ತಿದೆ: ಬಿ.ಎಸ್. ಯಡಿಯೂರಪ್ಪ

ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರರನ್ನು ಕಳೆದ 5 ವರ್ಷಗಳಿಂದ...
ಮೈಸೂರು: ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರರನ್ನು ಕಳೆದ 5 ವರ್ಷಗಳಿಂದ ಕಡೆಗಣಿಸಲಾಗುತ್ತಿದ್ದು ಇಂದಿನ ಮೈತ್ರಿ ಸರ್ಕಾರ ಈ ಬಗ್ಗೆ ಕಿವುಡನಂತೆ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಅವರು ನಿನ್ನೆ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ವೀರಶೈವ-ಲಿಂಗಾಯತ ನೌಕರರ ಅಭಿವೃದ್ಧಿ ಸಂಸ್ಥೆಯ 10ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಅದು ನೇಮಕಾತಿ ಅಥವಾ ವರ್ಗಾವಣೆಯಾಗಿರಲಿ, ಸರ್ಕಾರಿ ಉದ್ಯೋಗದಲ್ಲಿರುವ ಲಿಂಗಾಯತ ಮತ್ತು ವೀರಶೈವ ಸಮುದಾಯದವರನ್ನು ಅವರಿಗೆ ಸಾಮರ್ಥ್ಯವಿದ್ದರೂ ಕೂಡ ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗುತ್ತಿದೆ. ಈ ವಿಷಯವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದರು.

Related Stories

No stories found.

Advertisement

X
Kannada Prabha
www.kannadaprabha.com