ಕಳೆದ 5 ತಿಂಗಳ ಹಿಂದೆ ಉಪ ಚುನಾವಣೆಯಲ್ಲಿ ಶಿವರಾಮೇಗೌಡ ಸಂಸದರಾಗಿ ಆಯ್ಕೆಯಾದ ನಂತರ ಇದೀಗ ಈ ಬಾರಿ ಚುನಾವಣೆಯಲ್ಲಿ ನಿಖಿಲ್ ಗೌಡ ಪರ ಪ್ರಚಾರ ನಡೆಸಬೇಕಾಗಿದೆ. ನನಗೆ ಮತ್ತೊಮ್ಮೆ ಸಂಸದ ಸ್ಥಾನಕ್ಕೆ ಸ್ಪರ್ಧಿಸುವ ಆಕಾಂಕ್ಷೆಯಿತ್ತು, ಆದರೆ ಪಕ್ಷದ ಹಿರಿಯರ ತೀರ್ಮಾನಕ್ಕೆ ತಲೆಬಾಗಲೇಬೇಕು. ನಿಖಿಲ್ ನಿಲ್ಲುವ ಬಗ್ಗೆ ಅಂತಿಮ ನಿರ್ಧಾರವಾಗದಿದ್ದರೂ ಕೂಡ ದೇವೇಗೌಡರು ಮತ್ತು ಕುಮಾರಸ್ವಾಮಿ ಮಾಧ್ಯಮಗಳಿಗೆ ನಿಖಿಲ್ ಗೌಡ ಸ್ಪರ್ಧಿಸುತ್ತಿದ್ದಾರೆ ಎಂದಿದ್ದಾರೆ ಎಂದು ಶಿವರಾಮೇಗೌಡ ಹೇಳಿದರು.