ನಿನ್ನೆ ಮಲ್ಲೇಶ್ವರಂ ನ ಪಕ್ಷದ ಕಚೇರಿಯಲ್ಲಿ ಇಬ್ಬರು ನಾಯಕರ ನಡುವೆ ಏರು ಧ್ವನಿಯಲ್ಲಿ ಬಿರುಸಿನ ಮಾತುಕತೆ, ವಾಗ್ವಾದ ನಡೆದಿದೆ ಎಂದು ಗೊತ್ತಾಗಿದೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ರಾಜಕೀಯ ವಿಚಾರವಾಗಿ ಇಬ್ಬರು ನಾಯಕರ ನಡುವೆ ಗಲಾಟೆ, ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಪುನಃ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿರುವ ಬಗ್ಗೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕೆಂಡಾಮಂಡಲರಾಗಿದ್ದಾರೆ ಎಂದು ಹೇಳಲಾಗಿದೆ.