ಸಭೆ ಬಳಿಕ ಮಾತನಾಡಿದ ಆರ್.ಅಶೋಕ್, ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಯಡಿಯೂರಪ್ಪ ತಮಗೆ ವಹಿಸಿದ್ದರಿಂದ ಪಕ್ಷವನ್ನು ಗಟ್ಟಿಗೊಳಿಸುವ ಬಗ್ಗೆ ತಾವು ಕಾರ್ಯಪ್ರವೃತ್ತರಾಗಿದ್ದು, ಈ ನಿಟ್ಟಿನಲ್ಲಿ ಅಭ್ಯರ್ಥಿಗಳ ಆಯ್ಕೆ, ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಕುರಿತು ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.