ಬೆಂಗಳೂರು: ವೇದಿಕೆಯಲ್ಲಿ ಕಣ್ಣೀರಿಡುವ ದೇವೇಗೌಡರ ಕುಟುಂಬ ಸದಸ್ಯರ ನಡೆಯನ್ನು ಪ್ರತಿಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ.
ಮಾ.13 ರಂದು ಹೊಳೆನರಸೀಪುರದ ಮೂಡಲಹಿಪ್ಪೆ ಗ್ರಾಮದಿಂದ ಜೆಡಿಎಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಹಾಸನ ಲೋಕಸಭಾ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಡುವುದನ್ನು ಘೋಷಿಸಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ವೇದಿಕೆ ಮೇಲೆ ಕಣ್ಣೀರು ಹಾಕಿದ್ದರು. ಇದೇ ವೇಳೆ ತಂದೆಯವರ ತ್ಯಾಗ ದೊಡ್ಡದು ಎಂದು ರೇವಣ್ಣ ಸಹ ಕಣ್ಣೀರು ಹಾಕಿದ್ದರು.
ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ!
ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ!
ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು!
ಈ ಘಟನೆ ಬಗ್ಗೆ ಬಿಜೆಪಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ!ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ! ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು! ರಾಜ್ಯದ ಜನ ಈಗಲೂ ಮರುಳಾಗುವರೇ? ಎಂದು ಪ್ರಶ್ನಿಸಿದೆ.