ಹಾಸನ ನಂತರ ಇಂದು ಮಂಡ್ಯಕ್ಕೆ ದೇವೇಗೌಡರ ಕಣ್ಣೀರು ಶಿಫ್ಟ್: ಬಿಜೆಪಿ ಟೀಕೆ

ಹಾಸನದಲ್ಲಿ ಲೋಕಸಭೆ ಕ್ಷೇತ್ರಕ್ಕೆ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದಾಗಿ ಅಧಿಕೃತ ...
ಹಾಸನದಲ್ಲಿ ವೇದಿಕೆಯಲ್ಲಿ ಕಣ್ಣೀರು ಹಾಕಿದ ಹೆಚ್ ಡಿ ದೇವೇಗೌಡ
ಹಾಸನದಲ್ಲಿ ವೇದಿಕೆಯಲ್ಲಿ ಕಣ್ಣೀರು ಹಾಕಿದ ಹೆಚ್ ಡಿ ದೇವೇಗೌಡ
ಬೆಂಗಳೂರು: ಹಾಸನದಲ್ಲಿ ಲೋಕಸಭೆ ಕ್ಷೇತ್ರಕ್ಕೆ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದಾಗಿ ಅಧಿಕೃತ ಘೋಷಣೆ ಮಾಡಿದ್ದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸೇರಿದಂತೆ ಅವರ ಕುಟುಂಬ ವೇದಿಕೆಯಲ್ಲಿಯೇ ಕಣ್ಣೀರು ಹಾಕಿದ್ದಕ್ಕೆ ಬಿಜೆಪಿ ಟೀಕೆಯನ್ನು ಗುರುವಾರ ಕೂಡ ಮುಂದುವರಿಸಿದೆ.
ಇಂದು ದೇವೇಗೌಡರು ಮಂಡ್ಯದಲ್ಲಿ ತಮ್ಮ ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರ್ ಅವರ ಹೆಸರನ್ನು ಲೋಕಸಭೆ ಚುನಾವಣೆಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ನಿನ್ನೆಯ ಕಣ್ಣೀರಿನ ನಾಟಕ ಇಂದು ಮಂಡ್ಯಕ್ಕೆ ಶಿಫ್ಟ್ ಆಗಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com